ಕುಂದಾಪುರ, ಅ 08 (DaijiworldNews/MS): ಸಾಮಾಜಿಕ ಕಾರ್ಯಕರ್ತ ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಲ್ಲಿ ಓರ್ವರಾಗಿರುವ ಬಿಜೆಪಿ ಮುಖಂಡ ಬಾಲಚಂದ್ರ ಭಟ್ ಎಂಬಾತನ ಜಾಮೀನು ಅರ್ಜಿ ಎರಡನೇ ಬಾರಿಗೆ ಕುಂದಾಪುರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿ ಆದೇಶ ನೀಡಿದೆ.
ಯಡಮೊಗೆ ಉದಯ ಗಾಣಿಗ
ಈ ಹಿಂದೆ ಬಾಲಚಂದ್ರ ಭಟ್ ಜು.23 ರಂದು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದನ್ನು ನ್ಯಾಯಾಲಯ ತಿರಸ್ಕೃರಿಸಿತ್ತು. ಈಗ ಮತ್ತೆ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದ ಬಳಿಕ ಬಾಲಚಂದ್ರ ಭತ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಬಳಿಕ ಮತ್ತೊಂದು ಬಾರಿ ಸಲ್ಲಿಸಿರುವ ಅರ್ಜಿಯನ್ನು ಕೂಡ ನ್ಯಾಯಾಧೀಶ ರವೀಂದ್ರ ಎಂ.ಜೋಷಿ ತಿರಸ್ಕರಿಸಿ ಆದೇಶ ನೀಡಿದ್ದಾರೆ.
ಪ್ರಾಸಿಕ್ಯೂಶನ್ ಪರ ಜಿಲ್ಲಾ ಸರಕಾರಿ ಅಭಿಯೋಜಕ ಬೇಳೂರು ಪ್ರಕಾಶ್ಚಂದ್ರ ಶೆಟ್ಟಿ ವಾದಿಸಿದ್ದರು. ಜೂ.5ರಂದು ರಾತ್ರಿ ವೇಳೆ ಯಡಮೊಗೆ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಆತನ ತಂಡ ಉದಯ್ ಗಾಣಿಗ ಅವರ ಮೈಮೇಲೆ ಕಾರು ಹತ್ತಿಸಿ ಆ ಬಳಿಕ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.