ಕಾರ್ಕಳ, ಅ 08 (DaijiworldNews/MS): ಸಾರ್ವಜನಿಕ ಪ್ರದೇಶದಲ್ಲಿ ಕಸ ಬಿಸಾಕಿದವರನ್ನು ಹುಡುಕಿ ಅವರಿಗೆ ದಂಡ ವಿಧಿಸಿದ ಘಟನೆ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.
ಸಾಣೂರು ಗ್ರಾಮ ಪಂಚಾಯತ್ ಸ್ವಚ್ಛತೆಗೆ ಹೆಚ್ಚು ಪ್ರಾಮುಖ್ಯತೆಯನ್ನು ಕೊಡುತ್ತಾ ಬಂದಿದ್ದು ಸ್ವಚ್ಛ ಸಾಣೂರು ನಿರ್ಮಿಸುವ ಸಂಕಲ್ಪವನ್ನು ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಅದರಂತೆ ಸಾರ್ವಜನಿಕ ಸ್ಥಳದಲ್ಲಿ ಕಸವನ್ನು ಬಿಸಾಡಿದ ವ್ಯಕ್ತಿಯೊಬ್ಬರಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮಧು ಎಮ್ ಸಿ ರೂಪಾಯಿ 2000 ರೂಪಾಯಿ ದಂಡ ವಿಧಿಸಿದ್ದಾರೆ. ಈ ಮೂಲಕ ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಬಿಸಾಡುವ ವರಿಗೆ ಎಚ್ಚರಿಕೆಯನ್ನು ನೀಡಲಾಗಿದೆ ಮುಂದಿನ ದಿನಗಳಲ್ಲಿ ರಸ್ತೆಬದಿಯಲ್ಲಿ ಕಸವನ್ನು ಬಿಸಾಡಿದರೆ ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಸಾಣೂರು ಗ್ರಾಮ ಪಂಚಾಯತ್ ಪಂಚಾಯತ್ ಪ್ರಕಟನೆಯಲ್ಲಿ ತಿಳಿಸಿದೆ.