ಮಂಗಳೂರು, ಅ.09 (DaijiworldNews/PY): ದೇಶದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರಕಾರದ ಯುವಜನ ಮತ್ತು ಕ್ರೀಡಾ ಇಲಾಖೆ, ನೆಹರು ಕೇಂದ್ರ ಹಾಗೂ ದಕ್ಷಿಣ ರೈಲ್ವೆಯಿಂದ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ಸ್ವಚ್ಚ ಭಾರತ್ ಕಾರ್ಯಕ್ರಮವನ್ನು ಅ.8ರ ಶುಕ್ರವಾರ ಹಮ್ಮಿಕೊಳ್ಳಲಾಯಿತು.
ಅದರ ಅಂಗವಾಗಿ ರೈಲ್ವೆ ಸ್ಟೇಷನ್ ಸುತ್ತಮುತ್ತಲ ಪರಿಸರದಲ್ಲಿದ್ದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ, ಸ್ವಚ್ಛಗೊಳಿಸಲಾಯಿತು.
ಈ ಸ್ವಚ್ಛತಾ ಕಾರ್ಯದಲ್ಲಿ ಆರ್ಪಿಎಫ್, ಸಿಎಚ್ಐ ಸಿಬ್ಬಂದಿ ಹಾಗೂ ಇತರರು ಭಾಗವಹಿಸಿದ್ದರು.
ನೆಹರು ಯುವ ಕೇಂದ್ರದ ರಘುವೀರ್ ಸೂಟರ್ ಪೇಟೆ ಕಾರ್ಯಕ್ರಮದಲ್ಲಿದ್ದರು.