ಮಂಗಳೂರು, ಅ. 10 (DaijiworldNews/SM): ವೈಭವದ ಮಂಗಳೂರು ದಸರಾ ಮಹೋತ್ಸವಕ್ಕೆ ಕುದ್ರೋಳಿ ಕ್ಷೇತ್ರದಲ್ಲಿ ಕ್ಷೇತ್ರದ ಅಭಿವೃದ್ಧಿಯ ರುವಾರಿ ಜನಾರ್ದನ ಪೂಜಾರಿ ಅಕ್ಟೋಬರ್ 10ರ ರವಿವಾರ ಚಾಲನೆ ನೀಡಿದರು.
ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿ ಹಾಗೂ ಗಣ್ಯರು ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಸಮಿತಿ ಸದಸ್ಯರು, ಶಾಸಕರು ಉಪಸ್ಥಿತರಿದ್ದರು.