ಶಿರ್ವ, ಅ.11 (DaijiworldNews/HR): ಹೊಳೆಯಲ್ಲಿ ಮೀನಿಗೆ ಗಾಳ ಹಾಕಲು ಹೋಗಿ ಆಕಸ್ಮಿಕವಾಗಿ ಕಾಲು ಜಾರಿ ನೀರುಪಾಲಾಗಿದ್ದ ಪಾಲಾದ ಶಿರ್ವ ಮಟ್ಟಾರು ನಿವಾಸಿ ದೈವ ನರ್ತಕ ದಿಲೀಪ್ (30) ಅವರ ಮೃತದೇಹ ಸೋಮವಾರ ಮಧ್ಯಾಹ್ನ ಆಣೆಕಟ್ಟು ಬಳಿ ಪತ್ತೆಯಾಗಿದೆ.
ಉಡುಪಿ ಅಗ್ನಿಶಾಮಕ ದಳದ ಠಾಣಾಧಿಕಾರಿ ಸತೀಶ್.ಏನ್. ನೇತೃತ್ವದಲ್ಲಿ ಗ್ರೂಪ್ ಲೀಡರ್ ಸತೀಶ್ ಮತ್ತು ಸಿಬಂದಿ ಹಾಗೂ ಮಲ್ಪೆಯ ಮುಳುಗುತಜ್ಞ ಈಶ್ವರ್ ಸತತ 4 ಗಂಟೆ ಗಳ ಕಾಲ ಕಾರ್ಯಚರಣೆ ನಡೆಸಿ ಶವವನ್ನು ಪತ್ತೆಹಚ್ಚಿದ್ದಾರೆ.
ಇನ್ನು ಘಟನಾ ಸ್ಥಳಕ್ಕೆ ಶಿರ್ವ ಪಿ ಎಸ್ ಐ ಶ್ರೀಶೈಲ್ ಮುರಾಗೋಡ್ ಮತ್ತು ಸಿಬಂದಿ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.