ಮಂಗಳೂರು, ಅ 12 (DaijiworldNews/MS): ಸೋಲದೇವನಹಳ್ಳಿಯಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. 2 ದಿನದ ಹಿಂದೆ ನಾಪತ್ತೆಯಾಗಿದ್ದ ಅಮೃತವರ್ಷಿಣಿ(21), ಭೂಮಿಕಾ(12), ಚಿಂತನ್(12), ರಾಯನ್(12) ಇವರನ್ನು ಕೆಎಂಸಿ ಬಳಿ ಅಟೋ ಚಾಲಕ ಪತ್ತೆ ಹಚ್ಚಿ ಪಾಂಡೇಶ್ವರ ಪೊಲೀಸ್ ಠಾಣೆಗೆ ತಿಳಿಸಿದ್ದರು ಎನ್ನಲಾಗಿದೆ. ಒಟ್ಟಾರೆ ಪ್ರಕರಣ ಸುಖ್ಯಾಂತ್ಯ ಕಂಡಿದೆ.
ಬೆಂಗಳೂರಿನ ಸೋಲದೇವನಹಳ್ಳಿಯ ಕ್ರಿಟನ್ ಕುಶಾಲ್ ಅಪಾರ್ಟ್ಮೆಂಟ್ನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಪತ್ತೆಯಾಗಿದ್ದು ಸದ್ಯ ಪಾಂಡೇಶ್ವರ ಪೊಲೀಸರು ಮಕ್ಕಳನ್ನು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.
ಎಜಿಬಿ ಲೇಔಟ್ನ ನಾಲ್ವರು ಮಕ್ಕಳು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಅಮೃತವರ್ಷಿಣಿ ಮನೆಯಿಂದ ಚಿನ್ನ ಹಾಗೂ ಮೂರು ಸಾವಿರ ತೆಗೆದುಕೊಂಡು ಹೋಗಿದ್ದಳು ಎನ್ನಲಾಗಿದೆ. ಹೀಗಾಗಿ ಮಕ್ಕಳ ದಾಖಲೆಯನ್ನ ಎಲ್ಲಾ ಠಾಣೆಗಳಿಗೆ ರವಾನಿಸಿ ಮಕ್ಕಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗಿತ್ತು.