ಮಂಗಳೂರು, ಅ. 12 (DaijiworldNews/SM): ಕರಾವಳಿಯಾದ್ಯಂತ ಎಡೆಬಿಡದೆ ಭಾರೀ ಮಳೆ ಸುರಿಯುತ್ತಿದೆ. ಮಂಗಳವಾರ ಮಧ್ಯಾಹ್ನದಿಂದಲೇ ಎಡೆ ಬಿಡದೆ ಮಳೆಯಾಗುತ್ತಿದೆ.
ಏಕಾಏಕಿಯಾಗಿ ಆರಂಭಗೊಂಡ ಮಳೆಯಿಂದಾಗಿ ಸಾರ್ವಜನಿಕರು ಪರದಾಡುವಂತಾಯಿತು. ಇನ್ನು ನಿರಂತರವಾಗಿ ಸುರಿದ ಮಳೆಯಿಂದಾಗಿ ಮಂಗಳೂರಿನ ಹಲವು ಪ್ರದೇಶಗಳಲ್ಲಿ ನೀರು ನಿಂತು ಜನರು ಪರದಾಡುವಂತಾಯಿತು.
ಇನ್ನು ಕೆಲವು ಭಾಗಗಳಲ್ಲಿ ಮರ ಧರಾಶಾಹಿಯಾಗಿರುವ ಬಗ್ಗೆ ಕೂಡ ವರದಿಯಾಗಿದೆ. ಕೆಲವು ಕಡೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.