ಉಡುಪಿ, ಅ.13 (DaijiworldNews/HR): ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ ಹಾಗೂ ರಾಜ್ಯದಲ್ಲಿ ನೈರುತ್ಯ ಮುಂಗಾರು ತೀವ್ರಗೊಂಡಿರುವುದರಿಂದ ಮಂಗಳವಾರದಿಂದ ಉಡುಪಿ, ದಕ್ಷಿಣ ಕನ್ನಡದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.
ಅನಿರೀಕ್ಷಿತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದ್ದು, ಉಡುಪಿ ನಗರದ ಬೈಲಕೆರೆ, ಕೃಷ್ಣ ಮಠ ಪಾರ್ಕಿಂಗ್ ಪ್ರದೇಶಗಳಲ್ಲಿರುವ ಮನೆಗಳಿಗೆ ನೀರು ನುಗ್ಗಿದೆ.
ಇನ್ನು ಹೊರವಲಯದ ಕಲ್ಮಾಡಿ, ಮೂಡುಬೆಟ್ಟು ಭಾಗಗಳಲ್ಲಿರುವ ಮನೆಗಳಿಗೆ ಕೂಡಾ ನೆರೆ ನೀರು ನುಗಿದ್ದು, ರಸ್ತೆಯಲ್ಲಿ ನೀರು ನಿಂತು ಸಂಚಾರಕ್ಕೆ ತೊಡಕು ಉಂಟಾಗಿತ್ತು.
ಅಕ್ಟೋಬರ್ 16ರವರೆಗೆ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.