ಕಾರ್ಕಳ, ಅ.17 (DaijiworldNews/PY): ಬಜಗೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಉಮೇಶ್ ರಾವ್ (55) ನಿಧನರಾಗಿದ್ದಾರೆ.
ಕೆರ್ವಾಸೆ ಮೂಲದವರಾದ ಇವರು ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಸಂದರ್ಭದಲ್ಲಿ ಹಲವು ವಿಧ್ಯಾರ್ಥಿಗಳ ಕಲೆಗಳನ್ನು ಗುರುತಿಸಿ ಅವರನ್ನು ರಾಜ್ಯ, ರಾಷ್ಟ ಮಟ್ಟದಲ್ಲಿ ಗುರುತಿಸುವಲ್ಲಿ ಶ್ರಮವಹಿಸುವಲ್ಲಿ ಪ್ರಾಮಾಣಿಕ ಪ್ರಯತ್ನಕ್ಕೆ ನಾಗರಿಕರ ಪ್ರಯತ್ನಕ್ಕೆ ಪಾತ್ರರಾಗಿದ್ದರು. ಉತ್ತಮ ಶಿಕ್ಷಕ ಪ್ರಶಸ್ತಿಯು ಇವರ ಪಾಲಿಗೆ ಲಭಿಸಿತು.
ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಇವರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಿತು.
ಮೃತರು ಪತ್ನಿ ಪುತ್ರಿಯನ್ನು ಅಗಲಿದ್ದಾರೆ.