ಉಡುಪಿ, ಅ.17 (DaijiworldNews/HR): ಕಡಿಯಾಳಿ ಮಹಿಷಮರ್ದಿನಿ ದೇವಸ್ಥಾನದಿಂದ ಅಂಬಲಪಾಡಿ ಮಹಾಕಾಳಿ ಅಮ್ಮನವರ ಸನ್ನಿಧಾನದವರೆಗೆ ನಡೆದ ದುರ್ಗಾ ದೌಡ್ ಪಾದಯಾತ್ರೆಗೆ ಯಾವುದೇ ಪೂರ್ವಾನುಮತಿ ಪಡೆದಿಲ್ಲ ಎಂದು ಆರೋಪಿಸಿ ಉಡುಪಿ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಸಾಂದರ್ಭಿಕ ಚಿತ್ರ
ಈ ಬಗ್ಗೆ ಉಡುಪಿ ನಗರಸಭೆ ಪೌರಾಯುಕ್ತ ಹಾಗೂ ಕೊರೊನಾ ನೋಡೆಲ್ ಅಧಿಕಾರಿ ಅವರು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ದೂರಿನನ್ವಯ ಹಿಂದೂ ಜಾಗರಣಾ ವೇದಿಕೆ ಸಂಘಟನೆಯ ಕಾರ್ಯಕರ್ತರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 188, 269 ಐಪಿಸಿ ಕಲಂ: 5(1), 5(4) ದ ಕರ್ನಾಟಕ ಅಪಿಡಮಿಕ್ ಡಿಸಿಸ್ ಆಯಕ್ಟ್ 2020 ರಂತೆ ಪ್ರಕರಣ ದಾಖಲಿಸಲಾಗಿದೆ.