ಮಂಗಳೂರು, ಅ.20 (DaijiworldNews/PY): ಉಚ್ಚಿಲ ಪೆರಿಂಬೈಲ್ ಎಂಬಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಡಿಸಿಪಿ ಹರಿರಾಂ ಶಂಕರ್ ನೇತೃತ್ವದ ಪೊಲೀಸ್ ತಂಡ ದಾಳಿ ನಡೆಸಿದ್ದು, 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಕಲ್ಲಾಪು ನಿವಾಸಿ ಮಯ್ಯದ್ದಿ, ತಲಪಾಡಿ ನಿವಾಸಿ ರಾಯಲ್ ಡಿಸೋಜ ಎಂದು ಗುರುತಿಸಲಾಗಿದೆ.
ದಾಳಿಯ ವೇಳೆ 2 ಲಾರಿ, 3 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಎಂಟು ಮಂದಿ ಪರಾರಿಯಾಗಿದ್ದಾರೆ.
ಈ ಕುರಿತು ಉಳ್ಳಾಲ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತನಿಖೆ ಮುಂದುವರಿದಿದೆ.