ಉಡುಪಿ, ಅ 22 (DaijiworldNews/MS): ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹಲವಾರು ಭಾಗಗಳಲ್ಲಿ ವಾಹನ ಮೇಲ್ಸೇತುವೆ ನಿರ್ಮಾಣಕ್ಕೆ 50 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
ಅಂಬಲಪಾಡಿ- ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ರೂ. 24.56 ಕೋಟಿ ವೆಚ್ಚದಲ್ಲಿ,ಸಂತೆಕಟ್ಟೆ- ಉಡುಪಿ ವಿಧಾನಸಭಾ ಕ್ಷೇತ್ರ (ರೂ. 24.47 ಕೋಟಿ ವೆಚ್ಚದಲ್ಲಿ ಮೇಲ್ಸೇತುವೆ ನಿರ್ಮಾಣವಾಗಲಿದೆ.
ಈ ಮೇಲಿನ ಪ್ರದೇಶಗಳು ಕೂಡು ರಸ್ತೆಯನ್ನು ಹೊಂದಿದ್ದು ವಾಹನ ಸಂಚಾರವೂ ಹೆಚ್ಚಾಗಿದ್ದು ಬ್ಲಾಕ್ ಸ್ಪಾಟ್ ಝೋನ್ ಎಂದು ಗುರುತಿಸಲಾಗಿತ್ತು.
ವಾಹನ ಸಂಚಾರಕ್ಕೆ ಹಾಗೂ ಪ್ರಯಾಣಿಕರಿಗೆ ಸಹಾಯಕವಾಗುವಂತೆ ವಾಹನ ಮೇಲ್ಸೇತುವೆ ನಿರ್ಮಾಣ ಮಾಡಲು ಕೇಂದ್ರ ಸರಕಾರ ಅನುದಾನ ಬಿಡುಗಡೆ ಮಾಡಿದ್ದು, ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಶೀಘ್ರದಲ್ಲಿಯೇ ಕೆಲಸ ಕಾರ್ಯಗಳು ಆರಂಭಗೊಳ್ಳಲಿದೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.