ಮಂಗಳೂರು ಅ 22 (DaijiworldNews/MS): ಭಾರತದಲ್ಲಿ 100 ಕೋಟಿ ಡೋಸ್ಗಳ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಿದ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್ ಅಂಗಾರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ.
ಅಕ್ಟೋಬರ್ 22 ಶುಕ್ರವಾರ ಇಲ್ಲಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿದ ಎಸ್ ಅಂಗಾರ, 'ಭಾರತವು ಲಸಿಕೆ ಹಾಕಲು ಆರಂಭಿಸಿದ ಸುಮಾರು 9 ತಿಂಗಳಲ್ಲಿ 100 ಕೋಟಿ ಡೋಸ್ಗಳ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ರಾಜ್ಯದಲ್ಲಿ 6.25 ಲಕ್ಷ ಮತ್ತು ಜಿಲ್ಲೆಯಲ್ಲಿ 22 ಲಕ್ಷ ಲಸಿಕೆ ನೀಡಿಕೆ ಯಶಸ್ವಿಯಾಗಿದೆ. ಸಾಂಕ್ರಾಮಿಕ ಸಮಯದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದ್ದಕ್ಕಾಗಿ ನಾವು ಪ್ರಧಾನಿ ನರೇಂದ್ರ ಮೋದಿ, ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಸ್ತುತ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಧನ್ಯವಾದ . ಸಾಂಕ್ರಾಮಿಕ ಸಮಯದಲ್ಲಿ ಪಟ್ಟುಬಿಡದೆ ಕೆಲಸ ಮಾಡಿದ ಜಿಲ್ಲಾಡಳಿತ, ಡಿಎಚ್ಒ, ಡಿಎಂಒ, ಆರೋಗ್ಯ ಕಾರ್ಯಕರ್ತರ ಗುರುತರ ಕೆಲಸ ನಿಜಕ್ಕೂ ಶ್ಲಾಘನೀಯ.
ಮೂರನೇ ಅಲೆಗೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಈ ಬಗ್ಗೆ ಈಗಾಗಲೇ ಸಭೆ ನಡೆಸಲಾಗಿದೆ ಎಂದು ಎಸ್ ಅಂಗಾರ ಹೇಳಿದ್ದಾರೆ.
ಹೆಚ್ಚುತ್ತಿರುವ ಅಹಿತಕರ ಘಟನೆ ಮತ್ತು ಪೋಲಿಸರಿಗೆ ಮುಕ್ತ ಹಸ್ತ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿದ ಎಸ್ ಅಂಗಾರ 'ಅಹಿತಕರ ಘಟನೆ ನಡೆದಾಗಲೆಲ್ಲಾ ಕಠಿಣ ಕ್ರಮ ಕೈಗೊಳ್ಳುವಂತೆ ನಾನು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ನಮ್ಮ ಆಡಳಿತದಲ್ಲಿ ಈಗಾಗಲೇ ಪೊಲೀಸರಿಗೆ ಮುಕ್ತ ಹಸ್ತ ನೀಡಲಾಗಿದೆ ಎಂದು ತಿಳಿಸಿದ್ದಾರೆ.