ಕುಂದಾಪುರ, ಅ.22 (DaijiworldNews/HR): ಅನುಮಾನಸ್ಪದವಾಗಿ ಕಂಡು ಬಂದ ವ್ಯಕ್ತಿಯೊಬ್ಬನಿಂದ 1.800 ಕೆ.ಜಿ ಗಾಂಜಾ ಹಾಗೂ ಬ್ರೌನ್ ಶುಗರ್ ವಶಪಡಿಸಿಕೊಂಡು ಆತನನ್ನು ಬಂಧಿಸಿದ ಘಟನೆ ಕುಂದಾಪುರದಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಉತ್ತರಕನ್ನಡ ಜಿಲ್ಲೆಯ ಮಹಮ್ಮದ್ ಜಾಫರ್ ಗುಡುಮಿಯಾ(28) ಎಂದು ಗುರುತಿಸಲಾಗಿದೆ.
ಕುಂದಾಪುರ ಪೊಲೀಸ್ ಉಪವಿಭಾಗದ ಉಪಾಧೀಕ್ಷಕರಾದ ಶ್ರೀಕಾಂತ್ ಕೆ ರವರು ರಾತ್ರಿ ರೌಂಡ್ಸ್ ಕರ್ತವ್ಯದಲ್ಲಿದ್ದ ಸಮಯ ಕುಂದಾಪುರ ಶಾಸ್ತ್ರೀಪಾರ್ಕ್ ಬಳಿ ಅನುಮಾನಸ್ಪದವಾಗಿ ಕಂಡು ಬಂದ ಮಹಮ್ಮದ್ ಜಾಫರ್ ಎಂಬವನನ್ನು ದಸ್ತಗಿರಿ ಮಾಡಿ ಒಟ್ಟು 1 ಕೆ.ಜಿ 800 ಗ್ರಾಂ ತೂಕದ ಗಾಂಜಾ ಅಂದಾಜು ಮೌಲ್ಯ 40,000 ರೂಪಾಯಿ ಹಾಗೂ 01 ಗ್ರಾಂ ಬ್ರೌನ್ ಶುಗರ್ ಅಂದಾಜು ಮೌಲ್ಯ 10,000 ರೂಪಾಯಿ, 2 ಮೊಬೈಲ್ ಫೋನ್, 1,500 ರೂಪಾಯಿ ನಗದನ್ನು ಸ್ವಾಧೀನಪಡಿಸಿಕೊಂಡು ಕುಂದಾಪುರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಕಾರ್ಯಚರಣೆಯಲ್ಲಿ ಕುಂದಾಪುರ ಪೊಲೀಸ್ ಉಪಾಧೀಕ್ಷಕರ ಕಛೇರಿಯ ಅಪರಾಧ ವಿಭಾಗದ ಸಿಬ್ಬಂದಿಯವರಾದ ರಾಘವೇಂದ್ರ ಉಪ್ಪುಂದ, ರಾಮು ಹೆಗ್ಡೆ, ವಿಜಯ ಕುಮಾರ್, ರಮೇಶ ಕುಲಾಲ್, ಕುಂದಾಪುರ ಪೊಲೀಸ್ ಠಾಣೆಯ ರಾಘವೇಂದ್ರ ಮೊಗೇರ ಮತ್ತು ವಿಜೇತ್ ಹಾಗೂ ಜೀಪು ಚಾಲಕರಾದ ರಾಜು ರವರು ಭಾಗವಹಿಸಿದ್ದಾರೆ.