ಕಾಪು, ಅ 23 (DaijiworldNews/MS): ಪಾದಾಚಾರಿ ಮಹಿಳೆಗೆ ಕಾರು ಢಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಳೂರು ಯೂನಿಯನ್ ಬ್ಯಾಂಕ್ ಬಳಿ ಅ. 23 ರ ಶನಿವಾರ ಸಂಭವಿಸಿದೆ.ಮೃತರನ್ನು ಮೂಳೂರು ಪಡು ನಿವಾಸಿ ಆಯಿಷಾ (42) ಎಂದು ಗುರುತಿಸಲಾಗಿದೆ.
ಮನೆಗೆ ದಿನಸಿ ಸಾಮಾಗ್ರಿ ಖರೀದಿಸಲೆಂದು ಪೇಟೆಗೆ ಬಂದಿದ್ದ ಅವರು ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಯೂನಿಯನ್ ಬ್ಯಾಂಕ್ ಮುಂಭಾಗದಲ್ಲಿ ರಸ್ತೆಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರಿನತ್ತ ತೆರಳುತ್ತಿದ್ದ ಬಲೆನೋ ಕಾರು ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಪು ಎಸ್ ಐ ರಾಘವೇಂದ್ರ ಸಿ.,ಕ್ರೈಂ ಎಸ್ಸೈ ತಿಮ್ಮೇಶ್ ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ಮುಂದುವರಿಸಿದ್ದಾರೆ