ಸುಬ್ರಹ್ಮಣ್ಯ, ಅ 26 (DaijiworldNews/MS): ಸುಬ್ರಮಣ್ಯ - ಮಂಗಳೂರು ರೈಲ್ವೆಯ ಸುಬ್ರಹ್ಮಣ್ಯ ಸಮೇತ ಸೋಮವಾರ ಹಳಿ ಬಿರುಕು ಬಿಟ್ಟಿದ್ದು, ರೈಲು ಚಾಲಕನ ಸಮಯ ಪ್ರಜ್ಞೆಯಿಂದ ಭಾರೀ ಅವಘಡ ತಪ್ಪಿದೆ.
ಮುಂಜಾನೆ ಸಂಚರಿಸುವ ಬೆಂಗಳೂರು - ಕಾರವಾರ ರೈಲು ನೆಟ್ಟಣದಿಂದ ಮುಂದಕ್ಕೆ ಎಡಮಂಗಲ ಸಮೀಪ ತಲುಪಿದಾಗ ಹಳಿ ಬಿರುಕು ಬಿಟ್ಟಿರುವುದು ರೈಲಿನ ಒಂದು ಭೋಗಿ ಚಲಿಸಿದ ಬಳಿಕ ಚಾಲಕನ ಗಮನಕ್ಕೆ ಬಂದಿದೆ.ಕೂಡಲೇ ಸಮಯಪ್ರಜ್ಞೆ ಮೆರೆದ ಚಾಲಕ ರೈಲನ್ನು ನಿಯಂತ್ರಿಸಿ ನಿಲುಗಡೆ ಮಾಡಿ ಘಟನೆಯನ್ನು ಇಲಾಖೆಯ ಗಮನಕ್ಕೆ ತಂದಿದ್ದಾರೆ.
ಆ ಬಳಿಕ ಕಾರ್ಯಾಚರಣೆ ನಡೆಸಿ ದುರಸ್ತಿ ನಡೆಸಿ ಸಂಚರಿಸಲು ಅವಕಾಶ ನೀಡಲಾಯಿತು. ಚಾಲಕನ ಸಮಯ ಪ್ರಜ್ಞೆ ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ