ಮಂಗಳೂರು, ಅ.27 (DaijiworldNews/PY): ಬೈಕಂಪಾಡಿಯ ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.
ಬಂಧಿತ ಆರೋಪಿಯನ್ನು ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಎಂದು ಗುರುತಿಸಲಾಗಿದೆ.
ಬೈಕಂಪಾಡಿಯ ಮೊಬೈಲ್ ಅಂಗಡಿಗೆ ಮೊಬೈಲ್ ಖರೀದಿಸಲು ಯುವತಿ ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಯುವಕ ತನ್ನ ನಿಜವಾದ ಹೆಸರನ್ನು ಮರೆಮಾಚಿ ಹಿಂದೂ ಎಂದು ತಿಳಿಸಿ, ಪ್ರೀತಿಯ ನಾಟಕವಾಡಿ ಕಳೆದ ಆಗಸ್ಟ್ ತಿಂಗಳಿನಲ್ಲಿ ಲಾಡ್ಜ್ವೊಂದಕ್ಕೆ ಕರೆದೊಯ್ದು ಅತ್ಯಾಚಾರ ವೆಸಗಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.