ಮಂಗಳೂರು, ಅ.27 (DaijiworldNews/PY): ಫ್ಲೈಓವರ್ ನಿಂದ ಕೆಳಕ್ಕೆ ಬಿದ್ದು ಬುಲೆಟ್ ಸವಾರ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಬುಧವಾರ ಸಂಜೆ ವೇಳೆ ನಡೆದಿದೆ.
ಮೃತರನ್ನು ಕುಂಪಲ ಸರಳಾಯಕಾಲನಿ ನಿವಾಸಿ ಸುಭ್ರಹ್ಮಣ್ಯ ರಾವ್ ಸಿಂದಿಯಾ (50) ಎಂದು ಗುರುತಿಸಲಾಗಿದೆ. ಇವರು ಕುಂಪಲ ಯುವ ಮರಾಠದ ಮಾಜಿ ಅಧ್ಯಕ್ಷರಾಗಿದ್ದರು.
ಮಂಗಳೂರು ಕಡೆಯಿಂದ ಕುಂಪಲ ಕಡೆಗೆ ಬುಲೆಟ್ ವಾಹನದಲ್ಲಿ ಬರುವ ಸಂದರ್ಭ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ. ಪರಿಣಾಮ ಬುಲೆಟ್ ಫ್ಲೈಓವರ್ಗೆ ಢಿಕ್ಕಿ ಹೊಡೆದಿದ್ದು, ಸವಾರ ಸೇತುವೆಯಿಂದ ಕೆಳಗೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದರು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.