ಮಂಗಳೂರು,ಅ 28 (DaijiworldNews/MS): ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಳಲುತ್ತಿದ್ದ ಮಹಿಳೆಯೊಬ್ಬರು ವೆನ್ಲಾಕ್ ಆಸ್ಪತ್ರೆಗೆ ಆಗಮಿಸಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಕಾದ ಬಳಿಕವೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿ ಡಿಎಂ ಅವರು ತನಿಖೆ ಪೂರ್ಣಗೊಳಿಸಿದ್ದು ವರದಿಯನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಅವರಿಗೆ ಸಲ್ಲಿಸಿದ್ದಾರೆ.
ಈ ವಿಚಾರವಾಗ್ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿದ್ದು , " ವೈದ್ಯರ ನಿರ್ಲಕ್ಷ್ಯ ಆರೋಪಕ್ಕೆ ಸಂಬಂಧಿ ಸಿಡಿಎಂ ಅವರು ವರದಿ ಸಲ್ಲಿಸಿದ್ದು ಪರಿಶೀಲನೆ ನಡೆಸಲಾಗುವುದು ಸದ್ಯದಲ್ಲಿಯೇ ಆರೋಗ್ಯ ನಡೆಯಲಿದ್ದು ಆಸ್ಪತ್ರೆಗೆ ಮೂಲಭೂತ ಸೌಕರ್ಯ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುವುದು" ಎಂದು ತಿಳಿಸಿದ್ದಾರೆ.