ಮಂಗಳೂರು, ಅ. 31 (DaijiworldNews/SM): 2020-21ರ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ವಿವಿಧ ಕ್ಷೇತ್ರದ 66 ಮಂದಿ ಸಾಧಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರಾವಳಿಯ ಆರು ಮಂದಿ ಸಾಧಕರು ಸೇರಿದಂತೆ ಒಂದು ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಶಸ್ತಿಗೆ 10 ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದ್ದು, ಈ ಪೈಕಿ ಮಂಗಳೂರಿನ ರಾಮಕೃಷ್ಣಾಶ್ರಮ ಆಯ್ಕೆಯಾಗಿದೆ.
ಜಾನಪದ ಕ್ಷೇತ್ರದಲ್ಲಿ ಉಡುಪಿಯ ಬನ್ನಂಜೆ ಬಾಬು ಆಯ್ಕೆಯಾಗಿದ್ದಾರೆ.
ಸಂಗೀತ ಕ್ಷೇತ್ರದಲ್ಲಿನ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಹೆರಾಲ್ಡ್ ಸಿರೀಲ್ ಡಿಸೋಜ ಆಯ್ಕೆಯಾಗಿದ್ದಾರೆ.
ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ದ.ಕ. ಜಿಲ್ಲೆಯ ಡಾ. ಸುರೇಶ್ ರಾವ್ ಅವರನ್ನು ಆಯ್ಕೆ ಮಾಡಲಾಗಿದೆ.
ಕ್ರೀಡಾ ಕ್ಷೇತ್ರದ ಸಾಧನೆಗೆ ಉಡುಪಿಯ ರೋಹಿತ್ ಕುಮಾರ್ ಕಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.
ಪರಿಸರದ ಸಾಧನೆಗೆ ದ.ಕ. ಜಿಲ್ಲೆಯ ಬೈಕಂಪಾಡಿ ರಾಮಚಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.
ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗೆ ಉಡುಪಿಯ ಯು.ಬಿ. ರಾಜಲಕ್ಷ್ಮೀ ಆಯ್ಕೆಯಾಗಿದ್ದಾರೆ.