ಮಂಗಳೂರು, ನ.01 (DaijiworldNews/PY): ಮಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಅವರು ಮಾದರಿ ಕಾರ್ಯಾಚರಣೆಗೆ ಕೇಂದ್ರ ಸಚಿವಾಲಯ ನೀಡುತ್ತಿರುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಹೇಶ್ ಪ್ರಸಾದ್ ಅವರು ಉಡುಪಿ ಜಿಲ್ಲೆಯ ಚೆರ್ಕಾಡಿ ಅವರು. ಇವರು ಮೂಡುಬಿದಿರೆ ಮಹಾವೀರ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಇವರು ಕಾರವಾರ, ಪುತ್ತೂರು, ಮಣಿಪಾಲ ಹಾಗೂ ಕಾಪು ಪೊಲೀಸ್ ಠಾಣೆಗಳಲ್ಲಿ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಇಲ್ಲಿನ ಸಿಸಿಬಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಐಸಿಸ್ ವಿರುದ್ಧ ನಡೆಸಿದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ.