ಮಂಗಳೂರು, ನ. 02 (DaijiworldNews/HR): ಉಪಚುನಾವಣೆಯಲ್ಲಿ ಹಾನಗಲ್ ನಲ್ಲಿ ಸಣ್ಣಮಟ್ಟದ ಸೋಲಾಗಿದ್ದು, ಇದನ್ನು ಸವಾಲಾಗಿ ಸ್ವೀಕಾರ ಮಾಡುತ್ತೇವೆ. ಆದರೆ ಹಾನಗಲ್ ಕ್ಷೇತ್ರದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವಾಗಿದ್ದು, ಮತದಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದು ಸಂಘಟಿತ ಪ್ರಯತ್ನದ ಫಲ" ಎಂದರು.
"ಹಾನಗಲ್ನಲ್ಲಿ ಸಣ್ಣಮಟ್ಟದ ಸಣ್ಣಮಟ್ಟದ ಸೋಲಾಗಿದ್ದು, ಇದನ್ನು ಸವಾಲಾಗಿ ಸ್ವೀಕಾರ ಮಾಡುತ್ತೇವೆ. ಮುಂದಿನ ಚುನಾವಣೆಗೆ ಇನ್ನಷ್ಟು ಹೋರಾಟ ಮಾಡಲಿದ್ದು, ಮತದಾರ ಕೊಟ್ಟ ತೀರ್ಪಿಗೆ ತಲೆಬಾಗುತ್ತೇವೆ" ಎಂದಿದ್ದಾರೆ.
ಇನ್ನು ಹಾನಗಲ್ ಕ್ಷೇತ್ರ ದ ಸೋಲು ಮುಖ್ಯಮಂತ್ರಿಗೆ ಹಿನ್ನಡೆಯಲ್ಲ. ಅವರ ಕ್ಷೇತ್ರ ಅಂತಾನೂ ಇಲ್ಲ.ಅಲ್ಲಿನ ಮತದಾರ ಆಮಿಷಕ್ಕೆ ಒಳಗಾಗಿದ್ದಾನೆ. ಈ ಹಿನ್ನಲೆಯಲ್ಲಿ ನಮಗೆ ಹಿನ್ನಡೆಯಾಗಿದ್ದು, ಈ ಬಗ್ಗೆ ಕೂತು ಚರ್ಚೆ ಮಾಡುತ್ತೇವೆ" ಎಮ್ದರು.
ಹಾನಗಲ್ನಲ್ಲಿ ಸೂಟ್ ಕೇಸ್ ಕೆಲಸ ಮಾಡಿಲ್ಲ ಎಂಬ ಡಿಕೆಶಿ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಹಾಗಾದರೆ ಕನಕಪುರ ದಲ್ಲಿ ಡಿಕೆಶಿ ಗೆಲುವಿಗೆ ಸೂಟ್ ಕೇಸ್ ಕೆಲಸ ಮಾಡಿದ್ಯಾ?" ಎಂದು ಪ್ರಶ್ನಿಸಿದ್ದಾರೆ.