ಮಂಜೇಶ್ವರ, ನ. 02 (DaijiworldNews/SM): ಬೈಕ್ ನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮದ್ಯವನ್ನು ಅಬಕಾರಿ ದಳದ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದು, ಓರ್ವನನ್ನು ಬಂಧಿಸಿದ್ದಾರೆ.
ಅಡೂರಿನ ಪ್ರಶಾಂತ್(24) ಬಂಧಿತ ಆರೋಪಿಯಾಗಿದ್ದಾನೆ. ಕುಬಣೂರು ಒಡ್ಡ೦ಬೆಟ್ಟು ಎಂಬಲ್ಲಿಂದ ವಶಪಡಿಸಿಕೊಳ್ಳಲಾಗಿದೆ. ವಾಹನ ತಪಾಸಣೆ ನಡೆಸುತ್ತಿದ್ದಾಗ ಈ ದಾರಿಯಾಗಿ ಬಂದ ಬೈಕ್ ನ್ನು ತಡೆದು ತಪಾಸಣೆ ನಡೆಸಿದಾಗ ಮದ್ಯ ಮತ್ತು ಬಿಯರ್ ಪತ್ತೆಯಾಗಿದೆ. ಈ ಪ್ರದೇಶಕ್ಕೆ ಅಕ್ರಮ ಮದ್ಯ ಸಾಗಾಟ ಮಾಡುತ್ತಿರುವ ಬಗ್ಗೆ ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಲಾಯಿತು.