ಕುಂದಾಪುರ, ನ.03 (DaijiworldNews/PY): "ಲಾಭದ ನಿರೀಕ್ಷೆಯಿಂದಲೇ ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಬಂದ ಸಿದ್ದರಾಮಯ್ಯ ದಲಿತರನ್ನು ಕೆಣಕಿದರೆ ರಾಜ್ಯಾದ್ಯಂತ ಇನ್ನಷ್ಟು ಪ್ರತಿಭಟನೆ ನಡೆಸಲಾಗುವುದು" ಎಂದು ರಾಜ್ಯ ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಉಡುಪಿ ಜಿ.ಪಂ. ಮಾಜಿ ಅಧ್ಯಕ್ಷ ದಿನಕರ ಬಾಬು ಹೇಳಿದ್ದಾರೆ.
ಅವರು ಬುಧವಾರ ಇಲ್ಲಿನ ಶಾಸಿ ಸರ್ಕಲ್ನಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ನಡೆದ, ದಲಿತ ವಿರೋಧಿ ಹೇಳಿಕೆ ನೀಡಿದ ಸಿದ್ದರಾಮಯ್ಯ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.
"ತಾ.ಪಂ. ಮಾಜಿ ಸದಸ್ಯ ನಾರಾಯಣ ಗುಜ್ಜಾಡಿ, ಬಿಜೆಪಿಯಿಂದ ದಲಿತರಿಗೆ ಸಮಾನತೆ, ಸ್ವಾಭಿಮಾನ ದೊರೆತಿದೆ. ಸಿದ್ದರಾಮಯ್ಯನಂತಹವರ ಮಾತುಗಳಿಂದ ಇನ್ನಷ್ಟು ಮಂದಿ ಬೇರೆ ಬೇರೆ ಪಕ್ಷದಿಂದ ಬಿಜೆಪಿಗೆ ಬರುವ ಸಾಧ್ಯತೆಯಿದೆ. ಕಾಂಗ್ರೆಸ್ನಲ್ಲಿ ಏಕಚಕ್ರಾಧಿಪತ್ಯ ಸ್ಥಾಪನೆ ಉದ್ದೇಶದಿಂದ ಇಂತಹ ಹೇಳಿಕೆ ನೀಡಿ ಪಕ್ಷದಿಂದ ಎಲ್ಲರನ್ನೂ ಹೊರಗೆ ಕಳುಹಿಸಲು ಯೋಚನೆ ಮಾಡುತ್ತಿದ್ದಾರೆ" ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗೋಪಾಲ ಕಳಂಜೆ ಮಾತನಾಡಿದರು.
ತಾ.ಪಂ. ಮಾಜಿ ಸದಸ್ಯರಾದ ರೂಪಾ ಪೈ, ಪ್ರವೀಣ್ ಕುಮಾರ್ ಶೆಟ್ಟಿ ಕಡ್ಕೆ, ಪುರಸಭೆ ಸದಸ್ಯರಾದ ಪ್ರಭಾಕರ ವಿ., ಸಂತೋಷ್ ಕುಮಾರ್ ಶೆಟ್ಟಿ, ರಾಘವೇಂದ್ರ ಖಾರ್ವಿ, ರೈತ ಮೋರ್ಚಾ ಅಧ್ಯಕ್ಷ ಸುನಿಲ್ ಶೆಟ್ಟಿ, ಹಿಂದುಳಿದ ವರ್ಗ ಮೊರ್ಚಾದ ಅರುಣ್ ಬಾಣ, ಬಿಜೆಪಿ ಮಂಡಲ ಕಾರ್ಯದರ್ಶಿ ಸುರೇಂದ್ರ ಕಾಂಚನ್, ಯುವಮೋರ್ಚಾದ ಅಭಿಷೇಕ್ ಅಂಕದಕಟ್ಟೆ, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಕೈಪುಂಜಾಲು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಕುಂದಾಪುರ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಮಹೇಶ್ ಕಾಳಾವರ, ಪ್ರಧಾನ ಕಾರ್ಯದರ್ಶಿ ಮಹೇಶ್ ಎಂ.ಜಿ., ಮುಖಂಡರಾದ ಮಹೇಶ್ ಶೆಣೈ ಕುಂಭಾಶಿ, ಪ್ರದೀಪ್ ಮಾರ್ಗೋಳಿ, ಬೈಂದೂರು ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಚಂದ್ರ ಪಂಚವಟಿ, ಪ್ರಧಾನ ಕಾರ್ಯದರ್ಶಿ ಸುಂದರ ಬಾಬು ಮೊದಲಾದವರು ಇದ್ದರು.