ಬಂಟ್ವಾಳ, ನ.04 (DaijiworldNews/PY): ಕಾರಿಂಜ ದೇವಸ್ಥಾನದ ಆವರಣದಲ್ಲಿ ಪಾದರಕ್ಷೆ ಧರಿಸಿ ಪ್ರವೇಶಿಸಿ ವಿಕೃತಿ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಉಳ್ಳಾಲದ ಬುಶೇರ್ ರೆಹಮಾನ್(20), ಇಸ್ಮಾಯಿಲ್ ಅರ್ಹ ಮಾಜ್ (22), ಮಹಮ್ಮದ್ ತಾನಿಶ್ (19), ಮೊಹಮ್ಮದ್ ರಶಾದ್(19) ಎಂದು ಗುರುತಿಸಲಾಗಿದೆ.
ಕಾರಿನಲ್ಲಿ ಬಂಧಿತ ಕಿಡಿಗೇಡಿಗಳು ಕಾರಿಂಜ ದೇವಸ್ಥಾನಕ್ಕೆ ಪಾದರಕ್ಷೆ ಧರಿಸಿಕೊಂಡು ಪ್ರವೇಶಿಸಿದ್ದು, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಈ ಬಗ್ಗೆ ಈ ಬಗ್ಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಆರೋಪಿಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.