ಉಡುಪಿ, ನ. 04 (DaijiworldNews/SM): ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಇಳಿಕೆ ಮಾಡಿದ್ದು, ಇದು ಹೀಗೆ ಮುಂದುವರೆಯುವ ಅಪೇಕ್ಷೆ ನಮ್ಮದು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಅಂತರಾಷ್ಟ್ರೀಯ ದರ ಏರಿಕೆ ಆದ ಸಂದರ್ಭದಲ್ಲಿ ಬೆಲೆ ಏರಿಕೆ ಆಗುತ್ತದೆ. ಇಂಧನ ಬೆಲೆ ಏರಿಕೆ ಆದಲ್ಲಿ ಇತರೆ ವಸ್ತುಗಳ ಬೆಲೆ ಏರಿಕೆಯಾಗುತ್ತದೆ. ಹೀಗಾಗಿ ದರ ಕಡಿಮೆ ಆದಲ್ಲಿ ಎಲ್ಲರಿಗೂ ಒಳಿತು. ಈ ನಿಟ್ಟಿನಲ್ಲಿ ದೀಪಾವಳಿ ಸಂದರ್ಭದಲ್ಲಿ ಪ್ರಧಾನಿ ಮೋದಿ ದೇಶದ ಜನರಿಗೆ ಉಡುಗೊರೆ ನೀಡಿದ್ದಾರೆ ಎಂದು ಉಡುಪಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.