ಮಂಗಳೂರು, ನ 06 (DaijiworldNews/MS): ರಾಜ್ಯದಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂವನ್ನು ರಾಜ್ಯ ಸರಕಾರ ಹಿಂತೆಗೆದುಕೊಂಡಿತ್ತು.
ಇದೇ ಹಿನ್ನಲೆಯಲ್ಲಿ ಹಾಗೂ ದ.ಕ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಸಂಪೂರ್ಣವಾಗಿ ಹಿಂಪಡೆದಿರುವುದಾಗಿ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಇನ್ನು ರಾಜ್ಯದಲ್ಲಿ ಕೊರೊನಾ ಪಸರಿಸುವ ಪ್ರಮಾಣ ಕಡಿಮೆ ಆಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಒಂದೊಂದೆ ವಲಯಗಳಿಗೆ ವಿನಾಯಿತಿ ನೀಡುತ್ತಿದೆ, ಕಳೆದ ಎರಡು - ಮೂರು ತಿಂಗಳಿನಿಂದ ನೈಟ್ ಕರ್ಫ್ಯೂ ತೆರವುಗೊಳಿಸಬೇಕೆಂದು ವ್ಯಾಪಾರಸ್ಥರು ಮನವಿ ಮಾಡಿಕೊಂಡಿದ್ದರು. ಇದೀಗ ವ್ಯಾಪಾರಿಗಳು ಮನವಿಯನ್ನು ಸಮ್ಮತಿಸಿರುವ ರಾತ್ರಿ ಕರ್ಫ್ಯೂ ರದ್ದು ಮಾಡಿದೆ.