ಕೋಟ, ನ.07 (DaijiworldNews/PY): ಕಲ್ಲುಕೋರೆಗೆ ಬಳಸುವ ರಾಸಾಯನಿಕ ವಸ್ತು ಏಕಾಏಕಿ ಸ್ಪೋಟಗೊಂಡು ದಂಪತಿ ಗಾಯಗೊಂಡಿರುವ ಘಟನೆ ಶಿರಿಯಾ ಗ್ರಾಮದ ಪಡುಮುಂಡು ಎಂಬಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಗಾಯಗೊಂಡವರನ್ನು ದಿನೇಶ್ ಶೆಟ್ಟಿ (48) ಹಾಗೂ ಅವರ ಪತ್ನಿ ವಸಂತಿ ಶೆಟ್ಟಿ (40) ಎಂದು ಗುರುತಿಸಲಾಗಿದೆ. ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಏಕಾಏಕಿ ಸ್ಪೋಟ ಅಥವಾ ಪಟಾಕಿ ಸಿಡಿಸಿದ ಪರಿಣಾಮ ಕಲ್ಲುಕೋರೆಗೆ ಬಳಸುವ ರಾಸಾಯನಿಕ ವಸ್ತುವಿಗೆ ಸ್ಪೋಟಗೊಂಡಿದೆ ಎನ್ನಲಾಗಿದೆ. ಇದರ ಪರಿಣಾಮ ಮನೆಗೂ ಸ್ವಲ್ಪ ಹಾನಿಯಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಜಿಲ್ಲಾ ಎಸ್ಪಿ ಎನ್.ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಕುಮಾರಚಂದ್ರ, ಬ್ರಹ್ಮಾವರ ಸಿಐ ಅನಂತಪದ್ಮನಾಭ, ಕೋಟ ಠಾಣಾಧಿಕಾರಿ ಸಂತೋಷ್ ಬಿ.ಪಿ, ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಸ್ಫೋಟಕ್ಕೆ ನಿಖರವಾದ ಕಾರಣ ತಿಳಿದುಬಂದಿಲ್ಲ, ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಎಸ್ಪಿ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.