ಕಾರ್ಕಳ, ನ.08 (DaijiworldNews/PY): ಕ್ರೈಸ್ಟ್ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿನ 2020-21 ಸಾಲಿನಲ್ಲಿ ಎಸ್ಎಸ್ಎಲ್ಸಿ ತರಗತಿ ಮತ್ತು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಮಿಯ್ಯಾರಿನ ಪಲ್ಲೊಟ್ಟಿ ವಿಕಾಸ್ನ ನಿರ್ದೇಶಕ ವಂದನೀಯ ಫಾ.ಪೌಲ್ಕುಟಿನ್ಹಾ ಮುಖ್ಯ ಅತಿಥಿಗಳಾಗಿ ಆಗಮಿಸಿ ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಿದರು.
ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯಲ್ಲಿ 600ರಲ್ಲಿ 600 ಅಂಕಗಳನ್ನು ಗಳಿಸಿ ಪ್ರಥಮ ಸ್ಥಾನ ಪಡೆದ ವಿಜ್ಞಾನ ವಿಭಾಗದ ತುಷಾರ್, ಸ್ವೀಡಲ್ ಪಿಂಟೋ, ಲಿಶಾ ಲೋಬೋ ಹಾಗೂ ದ್ವಿತೀಯ ಸ್ಥಾನ ಪಡೆದ ಕೀರ್ತನಾ ಹೆಬ್ಬಾರ್, ವಾಣಿಜ್ಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಅನುಶ್ರೀ, ದ್ವಿತೀಯ ಸ್ಥಾನ ಪಡೆದ ಪ್ರಿಸ್ಟನ್ ಕ್ಯಾಸ್ಟಲಿನೋ, ಹತ್ತನೇ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದ ಪ್ರೀಶಲ್ ಡಿ’ಅಲ್ಮೇಡಾ ದ್ವಿತೀಯ ಸ್ಥಾನ ಪಡೆದ ಜನನಿ ಶೆಟ್ಟಿ ಅವರನ್ನು ನಗದು ಪುರಸ್ಕಾರದೊಂದಿಗೆ ಸನ್ಮಾನಿಸಲಾಯಿತು.
ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಡಾ.ಪೀಟರ್ ಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಶಿಕ್ಷಕ ಪ್ರೌಢಶಾಲಾ ವಿಭಾಗದ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ವಿಭಾಗದ ಮೇರಿಯನ್ ಡಿ’ಸೋಜ, ಪದವಿ ಪೂರ್ವ ವಿಭಾಗದ ಉಪಪ್ರಾಂಶುಪಾಲ ಡಾ. ಪ್ರಕಾಶ್ ಭಟ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ಜೆರಾಲ್ಡ್ ಡಿ’ಸಿಲ್ವಾ, ಪ್ರೌಢಶಾಲಾ ವಿಭಾಗದ ಶಿಲ್ಪ ಪ್ರಶಾಂತ್, ಪ್ರಾಥಮಿಕ ವಿಭಾಗದ ಕವಿತಾ ಪಯಾಸ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶೇಖ್ ಮೊಹಮ್ಮದ್ ಅಲ್ತಾಫ್, ಕಾರ್ಕಳ ರೋಟರಿ ಕ್ಲಬ್ ಅಧ್ಯಕ್ಷ ಸುರೇಶ್ ನಾಯಕ್, ಜೆಸಿಐ ಅಧ್ಯಕ್ಷ ಸಂತೋಷ್ ರೆಂಜಾಳ, ಲಯನ್ಸ್ ಕ್ಲಬ್ನ ಕಾರ್ಯದರ್ಶಿ ನಿತ್ಯಾನಂದ ಭಂಡಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ರಿಯಾ ಕರ್ಡೋಜ ಸ್ವಾಗತಿಸಿದರು. ಸಂಗೀತ ನಿರೂಪಿಸಿದರು. ಶಿವಾನಿ ವಂದಿಸಿದರು.