ಪುತ್ತೂರು, ನ.10 (DaijiworldNews/PY): ಪುತ್ತೂರಿನ ಹೊರ ವಲಯದ ಮೊಟ್ಟೆತಡ್ಕದಲ್ಲಿ ಅ. 9ರಂದು ಲಾರಿ ಹಾಗೂ ಆಕ್ಟಿವಾ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಓರ್ವ ಬುಧವಾರ ಸಾವನ್ನಪ್ಪಿದ್ದಾರೆ.
ಮೃತರನ್ನು ಸಹ ಸವಾರ ಕುರಿಯ ಬಳ್ಳಮಜಲು ನಿವಾಸಿ ವಸಂತ ರೈ ಎಂದು ಗುರುತಿಸಲಾಗಿದೆ. ಸವಾರ ಕುರಿಯ ಬಳ್ಳಮಜಲು ನಿವಾಸಿ ನಾರಾಯಣ ನಾಯ್ಕ ಗಂಭೀರವಾಗಿ ಗಾಯಗೊಂಡಿದ್ದರು.
ದ್ವಿಚಕ್ರ ವಾಹನ ಸವಾರರಿಬ್ಬರೂ ಗಾರೆ ಕೆಲಸದವರಾಗಿದ್ದು, ಸೆಂಟ್ರಿಂಗ್ ಕೆಲಸಕ್ಕೆ ಹೋಗಿ ಪುತ್ತೂರಿನಿಂದ ಕುರಿಯಕ್ಕೆ ಬರುತ್ತಿದ್ದ ಸಂದರ್ಭ ಮೊಟ್ಟೆತಡ್ಕದ ಎನ್ಆರ್ಸಿಸಿ ಪಂಜಳದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಟಿಪ್ಪರ್ ಲಾರಿಗೆ ಢಿಕ್ಕಿ ಹೊಡೆದಿತ್ತು.
ಢಿಕ್ಕಿ ಹೊಡೆದ ರಭಸಕ್ಕೆ ಆಕ್ಟಿವಾದಲ್ಲಿದ್ದ ಇಬ್ಬರು ಸವಾರರು ರಸ್ತೆಗೆ ಬಿದ್ದಿದ್ದು, ಇದರ ಪರಿಣಾಮ ಕಾಲು ತುಂಡಾಗಿದೆ. ಇಬ್ಬರು ಸವಾರರು ಕೂಡಾ ಹೆಲ್ಮೆಟ್ ಧರಿಸಿದ್ದು, ಹಾಗಾಗಿ ತಲೆ ಭಾಗಕ್ಕೆ ಯಾವುದೇ ರೀತಿಯಾದ ಗಾಯಗಳಾಗಿಲ್ಲ. ಮೊದಲು ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.