ಮಂಗಳೂರು, ನ. 10 (DaijiworldNews/SM): ಸಿಮೆಂಟ್ ಮಿಕ್ಸಿಂಗ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರೆ ಮೃತಪಟ್ಟ ಘಟನೆ ನಗರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಪಡೀಲ್ ನಲ್ಲಿ ನಡೆದಿದೆ.
ಖಾಸಗಿ ಆಸ್ಪತ್ರೆಯೊಂದರಲ್ಲಿ ಉದ್ಯೋಗಿಯಾರುವ ಪೂರ್ಣಿಮಾ(34) ಮೃತ ದುರ್ದೈವಿಯಾಗಿದ್ದಾರೆ. ಕೆಲಸ ಮುಗಿಸಿ ಕಾವೂರಿನ ತನ್ನ ಮನೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ. ಅಪಘಾತದಿಂದ ಗಂಭೀರ ಗಾಯಗೊಂಡ ಪೂರ್ಣಿಮಾ ಆಸ್ಪತ್ರೆ ಸೇರಿಸುವ ಮೊದಲೇ ಮೃತಪಟ್ಟಿದ್ದಾರೆ. ಪೂರ್ಣಿಮಾ ಪತಿ ಹಾಗೂ 3 ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.