ಕಡಬ, ನ 11 (DaijiworldNews/MS): ಕೋಡಿಂಬಾಳ-ಮಡ್ಯಡ್ಕ ರಸ್ತೆಯಲ್ಲಿ ನ.9ರ ಮಂಗಳವಾರ ಸಂಜೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ್ದು ಇದನ್ನು ಗಮನಿಸಿದ ಶಾಲಾ ಬಾಲಕಿ ಓಡಿ ತಪ್ಪಿಸಿಕೊಂಡಿರುವ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ.
ಕಡಬ ಪಟ್ಟಣ ಪಂಚಾಯತ್ ನಿಂದದ ಈಗಾಗಲೇ ವಾರ್ಡ್ ವಿಂಗಡನೆಗೆ ಸಂಬಂಧಿಸಿ ಪಂಚಾಯತ್ ಸಿಬ್ಬಂದಿಗಳು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಜಿ.ಪಿ.ಎಸ್. ಮಾಡುವ ಕೆಲಸವನ್ನು ಈಗಾಗಲೇ ಮಾಡುತ್ತಿದ್ದರು ಎನ್ನಲಾಗಿದೆ. ಅಂತೆಯೇ ನ.9ರಂದು ಕೋಡಿಂಬಾಳ ಗ್ರಾಮದ ಉಂಡಿಲ ಕ್ರಾಸ್ ಬಳಿ ಪಂಚಾಯತ್ ಇಬ್ಬರು ಸಿಬ್ಬಂದಿಗಳು ಜಿ.ಪಿ.ಎಸ್. ಮಾಡುತ್ತಿದ್ದರು ಎನ್ನಲಾಗಿದೆ. ಈ ವೇಳೆ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿ ಜಿ.ಪಿ.ಎಸ್. ಮಾಡುವ ಸಲುವಾಗಿ ಕಾರಿನಿಂದ ಇಳಿದಿದ್ದು ಇದನ್ನು ಕಂಡ ವಿದ್ಯಾರ್ಥಿನಿಯೂ ಓಡಿ ಹೋಗಿದ್ದಳು, ಈ ವಿಚಾರವೂ ಸಿಬ್ಬಂದಿಗಳ ಗಮನಕ್ಕೂ ಬಂದಿತ್ತು, ಬಾಲಕಿ ಮನೆಗೆ ಹೋಗಿ ಪೋಷಕರಲ್ಲಿ ತಿಳಿಸಿದ್ದು ಬಳಿಕ ಪೋಷಕರು ಪೋಲಿಸರಿಗೆ ಹಾಗೂ ಮಾಧ್ಯಮಕ್ಕೆ ಮಾಹಿತಿ ನೀಡಿದ್ದರು.
ಬಳಿಕ ಈ ವಿಚಾರವನ್ನು ತಿಳಿದ ಪಂಚಾಯತ್ ಸಿಬ್ಬಂದಿಗಳು ಸಾರ್ವಜನಿಕರು ಗೊಂದಲ ಪಡುವುದು ಬೇಡ ಎನ್ನುವ ದೃಷ್ಟಿಯಿಂದ ನಡೆದ ಘಟನೆಯನ್ನು ಪೋಲಿಸರಲ್ಲಿ ಹಾಗೂ ಸಂಬಂಧಪಟ್ಟವರಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿನಿ ತಪ್ಪು ಗ್ರಹಿಕೆಯಿಂದ ಗಾಬರಿಯಿಂದ ಓಡಿ ಹೋಗಿ ,ಮನೆಯಲ್ಲಿ ವಿಚಾರ ತಿಳಿಸಿದ್ದು ಹಲವು ತಿರುವು ಪಡೆದು ಗೊಂದಲಕ್ಕೆ ಕಾರಣವಾಗಿತ್ತು.