ಮಂಗಳೂರು, ನ. 11 (DaijiworldNews/SM): ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ನಗರದ ಪಣಂಬೂರ್ ಸರ್ಕಲ್ ಬಳಿ ನಡೆದಿದೆ.
ಮೃತರು ಕೂಳೂರು ನಿವಾಸಿ ಯು.ಕೆ. ಅಬ್ದುಲ್ ರಹೀಂ(63) ಎಂದು ಗುರುತಿಸಲಾಗಿದೆ. ಮನೆಯಿಂದ ಬೈಕಂಪಾಡಿ ಹೋಗುವ ರಸ್ತೆ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಹೀಂ ಆಸ್ಪತ್ರೆಗೆ ಸಾಗಿಸುವ ಮೊದಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.