ಮಂಗಳೂರು , ನ 13 (DaijiworldNews/MS): ಜಿಲ್ಲೆಯ ಗಡಿಭಾಗದಲ್ಲಿರುವ ಮದ್ಯದಂಗಡಿ ನಿಗದಿಪಡಿಸಲಾದ ಅವಧಿಯಂತೆ ವ್ಯವಹಾರ ನಡೆಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಪ್ರಸಕ್ತವಾಗಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಕಡಿಮೆಯಿರುವ ಹಾಗೂ ಪ್ರಕರಣಗಳು ನಿಯಂತ್ರಣದಲ್ಲಿರುವುದರಿಂದ ಈಗಾಲೇ ಜಿಲ್ಲೆಯಲ್ಲಿ ಇತರೆ ಮದ್ಯದಂಗಡಿಗಳು ನಿಗದಿತ ಅವಧಿಯವರೆಗೆ ಕಾರ್ಯ ನಿರ್ವಹಿಸುತ್ತಿರುವುದರಿಂದ ಕೇರಳ ರಾಜ್ಯದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು ಹಾಗೂ ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿರುವ 19 ಗ್ರಾಮಗಳ ಮದ್ಯದಂಗಡಿಗಳಿಗೆ ರಾಜ್ಯಸ್ವದ ಹಿತದೃಷ್ಟಿಯಿಂದ 2021ರ ಸೆಪ್ಟಂಬರ್ 18ರಂದು ಹೊರಡಿಸಲಾದ ಆದೇಶವನ್ನು ಹಿಂಪಡೆದು, ಸನ್ನದಿನಲ್ಲಿ ನಿಗದಿಪಡಿಸಲಾದ ಅವಧಿಯಂತೆ ವ್ಯವಹಾರ ನಡೆಸಲು ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಈ ಹಿಂದೆ ಗಡಿ ಭಾಗದಲ್ಲಿ ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶ ಹೊರಡಿಸಿದ್ದರು.