ಮಂಗಳೂರು, ನ.14 (DaijiworldNews/HR): ಬಂಗ್ರಕೂಳೂರು ವಾರ್ಡಿನ ಕೋಡಿಕಲ್ ನಾಗಬನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರೂ, ದಕ್ಷಿಣಕನ್ನಡ ಸಂಸದರಾದ ಮಾನ್ಯ ನಳಿನ್ ಕುಮಾರ್ ಕಟೀಲ್ ಹಾಗೂ ಮಂಗಳೂರು ಉತ್ತರ ಶಾಸಕರಾದ ಡಾ.ವೈ.ಭರತ್ ಶೆಟ್ಟಿಯವರು ಇಂದು ಭೇಟಿ ನೀಡಿದರು.
-
-
ನಾಗನ ವಿಗ್ರಹವನ್ನು ಯಾರೋ ದುಷ್ಕರ್ಮಿಗಳು ಎಸೆದು ದುಷ್ಕೃತ್ಯ ಮೆರೆದಿದ್ದು ಕೂಡಲೇ ಆರೋಪಿಗಳನ್ನು ಬಂಧಿಸಿ ಇಂತಹ ಕೃತ್ಯಗಳನ್ನು ಇನ್ನು ಜಿಲ್ಲೆಯಲ್ಲಿ ನಡೆಯದಂತೆ ಸೂಕ್ತ ಕ್ರಮಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಶ್ರೀ ಸುದರ್ಶನ್ ಮೂಡಬಿದ್ರಿ, ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್ ಕೋಡಿಕಲ್, ಶ್ರೀ ಮನೋಜ್ ಕುಮಾರ್, ಲೋಹಿತ್ ಅಮೀನ್, ಕೋಡಿಕಲ್ ನಾಗಬನ ಮುಖ್ಯಸ್ಥರಾದ ಶ್ರೀ ಭಾಸ್ಕರ್ ಶೆಟ್ಟಿ, ಬಿಜೆಪಿ ಉತ್ತರ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀ ಸಂದೀಪ್ ಪಚ್ಚನಾಡಿ, ಸಂಘಟನೆ ಪ್ರಮುಖರು, ಮಂಗಳೂರು ಕಮಿಷನರ್ ಶಶಿಕುಮಾರ್, ಡಿ.ಸಿ.ಪಿ ಹರಿರಾಮ್ ಶಂಕರ್, ಗ್ರಾಮಸ್ಥರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.