ಕಾರ್ಕಳ, ನ. 15 (DaijiworldNews/SM): ಸುಮಾರು 25 ಸಾವಿರ ರೂಪಾಯಿ ಮೌಲ್ಯದ ಅಡಿಕೆ ಕಳವುಗೈದು ಸಾಗಾಟ ಮಾಡುತ್ತಿದ್ದ ರಿಕ್ಷಾ ಚಾಲಕನನ್ನು ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿರುವ ಘಟನೆ ಸೋಮವಾರದಂದು ನಡೆದಿದೆ. ನಿಟ್ಟೆ ಅಂಬಡೆಕಲ್ಲಿನ ಕಾರ್ತಿಕ್(21) ಬಂಧಿತ ಆರೋಪಿಯಾಗಿದ್ದಾನೆ.
ಕುಂಟಾಡಿಯ ರಮೇಶ್ ಅಮೀನ್ ಎಂಬವರಿಗೆ ಸೇರಿದ ತೋಟದಿಂದ ಕಾರ್ತಿಕ್, ಸನೋಜ್ ಹಾಗೂ ಇನ್ನೊಬ್ಬ ಸೇರಿದಂತೆ ಮೂವರು ಅಡಿಕೆ ಕಳವುಗೈದಿದ್ದರು. ಸಾರ್ವಜನಿಕ ಮಾಹಿತಿಯನ್ವಯ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ ಸುಮಾರು 25 ಸಾವಿರ ಮೌಲ್ಯದ ಅಡಿಕೆಯ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ ರಿಕ್ಷಾವನ್ನು ವಶಪಡಿಸಲಾಗಿದೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಕೇಸುದಾಖಲಾಗಿದೆ.