ಮಂಗಳೂರು, ನ. 18 (DaijiworldNews/SM): ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ನಿಂದ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅಂತಿಮ ಪಟ್ಟಿ ಹೈಕಮಾಂಡ್ ಅಂಗಳದಲ್ಲಿದ್ದು, ಹೈಕಮಾಂಡ್ ಅಂತಿಮ ಅಭ್ಯರ್ಥಿಯನ್ನು ಘೋಷಣೆ ಮಾಡಲಿದೆ.
ಹೈಕಮಾಂಡ್ ಅಂಗಳದಲ್ಲಿ ಶಶಿಧರ್ ಹೆಗ್ಡೆ ಹಾಗೂ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಹೆಸರುಗಳಿದ್ದು ಇಬ್ಬರಲ್ಲಿ ಯಾರಿಗೆ ಟಿಕೆಟ್ ಸಿಗಲಿದೆ ಎನ್ನುವುದು ಸದ್ಯದ ಕುತೂಹಲವಾಗಿದೆ.
ಈ ಹಿಂದೆ ರಾಜೇಂದ್ರ ಕುಮಾರ್ ಸ್ವತಂತ್ರ ಅಭ್ಯರ್ಥಿ ಎಂದು ಘೊಷಿಸಿದ್ದರು. ಕಾಂಗ್ರೆಸ್ ನಿಂದ ಅಭ್ಯರ್ಥಿ ಕಣಕ್ಕಿಳಿಸಿ ರಾಜೇಂದ್ರ ಕುಮಾರ್ ಪಕ್ಷೇತರರಾಗಿ ಕಣಕ್ಕಿಳಿದಲ್ಲಿ ಮತ ದ್ರುವೀಕರಣವಾಗುವ ಹಿನ್ನೆಲೆಯಲ್ಲಿ ರಾಜೇಂದ್ರ ಕುಮಾರ್ ಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ನ ಒಂದು ಬಣ ಆಗ್ರಹಿಸಿತ್ತು. ಈ ಹಿನ್ನೆಲೆಯಲ್ಲಿ ಬುಧವಾರದಂದು ರಾಜೇಂದ್ರ ಕುಮಾರ್ ಜೊತೆ ಡಿಕೆಶಿ ಮೊದಲ ಸುತ್ತಿನ ಮಾತುಕತೆ ನಡೆಸಿದ್ದರು.
ಇದೀಗ ಇಂದು ದೆಹಲಿಗೆ ಪಟ್ಟಿ ಹಿಡಿದುಕೊಂಡು ಡಿಕೆ ಶಿವಕುಮಾರ್ ತೆರಳಿದ್ದಾರೆ. ಹೈಕಮಾಂಡ್ ಜೊತೆ ಚರ್ಚೆ ನಡೆಸಿದ್ದಾರೆ. ಮತ್ತೊಂದೆಡೆ ದ.ಕ. ಜಿಲ್ಲಾ ಕಾಂಗ್ರೆಸ್ ಮುಖಂಡರಿಂದ ದೆಹಲಿಯಲ್ಲಿ ಪ್ರಮುಖರ ಭೇಟಿ ಮಾಡಿದ್ದು, ಶಶಿಧರ್ ಹೆಗ್ಡೆಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಪಕ್ಷಕ್ಕಾಗಿ ಪ್ರಾಮಾಣಿಕ ಸೇವೆಗೈದವರಿಗಾಗಿ ಟಿಕೆಟ್ ನೀಡುವಂತೆ ಪ್ರಮುಖರು ಆಗ್ರಹಿಸುತ್ತಿದ್ದಾರೆ.
ಹೈಕಮಾಂಡ್ ಅಂಗಳದಲ್ಲಿ ಅಂತಿಮ ಆಕಾಂಕ್ಷಿಗಳ ಪಟ್ಟಿ ಇದ್ದು, ಯಾರಿಕೆ ಕಾಂಗ್ರೆಸ್ ನಿಂದ ಪರಿಷತ್ ಗೆ ಟಿಕೆಟ್ ಲಭಿಸಲಿದೆ ಎನ್ನುವುದು ಸದ್ಯದ ಕುತೂಹಲ