ಉಡುಪಿ, ನ. 19 (DaijiworldNews/SM): ಇಲ್ಲಿನ ಸಿಟಿ ಬಸ್ ನಿಲ್ದಾಣ ಬಳಿಯ ಬೈಲಕೆರೆಯ ಗುಜರಿ ಅಂಗಡಿಯಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಲಕ್ಷಾಂತರ ಮೌಲ್ಯದ ಸೊತ್ತು ಬೆಂಕಿಗಾಹುತಿಯಾಗಿರುವ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.
ಮುಖ್ಯ ರಸ್ತೆಯಿಂದ ಸುಮಾರು ಅರ್ಧ ಕಿಲೋಮೀಟರ್ ಒಳಗಡೆ ಇರುವ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆದಿದೆ. ಸುಮಾರು ನಾಲ್ಕು ಅಗ್ನಿಶಾಮಕ ವಾಹನಗಳ ಬಳಕೆ ಮಾಡಲಾಗಿದೆ.
ಆಯಕಟ್ಟಿನ ಪ್ರದೇಶದಲ್ಲಿ ಕಟ್ಟಡ ಇರುವ ಕಾರಣದಿಂದಾಗಿ ಬೆಂಕಿ ನಿಯಂತ್ರಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದಾರೆ.
ಅಗ್ನಿಶಾಮಕ ವಾಹನ ಸಂಚಾರಿಸಲು ಕೂಡಾ ಅವಕಾಶ ಇಲ್ಲದ ರಸ್ತೆಯಾಗಿರುವ ಹಿನ್ನೆಲೆ ಸುಮಾರು ಅರ್ಧ ಕಿಲೋಮೀಟರ್ ದೂರದಿಂದ ಪೈಪ್ ನಲ್ಲಿ ನೀರು ಹಾಯಿಸಲಾಗುತ್ತಿದೆ.