ಮಂಗಳೂರು, ನ. 19 (DaijiworldNews/SM): ಕೇಂದ್ರ ಸರಕಾರ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆದ ಹಿನ್ನೆಲೆ ದೇಶದೆಲ್ಲೆಡೆ ರೈತರು ಸಂಭ್ರಮಾಚರಣೆ ನಡೆಸಿದ್ದಾರೆ. ಮಂಗಳೂರಿನಲ್ಲೂ ರೈತ ಸಂಘಟನೆಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಇಂದು ಮಣ್ಣಿನ ಮಕ್ಕಳ ಹೋರಾಟಕ್ಕೆ ಮಣಿದು ಮೋದಿ ಸರಕಾರ ಕೃಷಿ ತಿದ್ದುಪಡಿಕಾಯ್ದೆಗಳನ್ನು ಹಿಂಪಡೆದುಕೊಂಡಿದೆ. ಇದು ರೈತರ ಚಾರಿತ್ರಿಕ ಹೋರಾಟಕ್ಕೆ ಸಂದ ಜಯ ಎಂದು ರೈತ ಮುಖಂಡರು ಹರ್ಷ ವ್ಯಕ್ತಪಡಿಸಿದರು.
ಇನ್ನು ಸಂಭ್ರಮಾಚರಣೆಯಲ್ಲಿ ರೈತ ಸಂಘಟನೆ, ದಲಿತ ಸಂಘಟನೆ, ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ಕೈಜೋಡಿಸಿತ್ತು. ಇನ್ನು ರೈತ ಮುಖಂಡರು ಪಟಾಕಿ ಸಿಡಿಸಿ ಹರ್ಷೋದ್ಘಾರ ವ್ಯಕ್ತಪಡಿಸಿದರು.