ಬಂಟ್ವಾಳ,ನ.21 (DaijiworldNews/HR): ಜನರಿಗೂ ಶಾಲೆಗೂ ಉತ್ತಮ ಸಂಬಂಧ ಅಗತ್ಯವಾಗಿದ್ದು, ಸರಕಾರದಿಂದ ಸೌಲಭ್ಯ ಸಿಗದೇ ಇದ್ದಾಗ ಪೋಷಕರು, ಊರವರು ಪರ್ಯಾಯವಾಗಿ ಕೆಲಸ ಮಾಡಬೇಕಾಗುತ್ತದೆ. ನಾವು ಇಚ್ಛಾಶಕ್ತಿಯನ್ನು ಪ್ರದರ್ಶನ ಮಾಡಿದಾಗ ಶಾಲೆಯ ಅಭಿವೃದ್ಧಿ ಸಾಧ್ಯ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
-
-
ಪಂಜಿಕಲ್ಲು ಗ್ರಾಮದ ಬುಡೋಳಿ ನೇತಾಜಿ ಕಿ.ಪ್ರಾ.ಶಾಲೆಗೆ ಕಾಟಿಪಳ್ಳ ಜಾನಕಿ ಚಾರಿಟೇಬಲ್ ಸೇವಾ ಟ್ರಸ್ಟ್, ಹಳೇ ವಿದ್ಯಾರ್ಥಿ ಸಂಘ ಹಾಗೂ ಗ್ರಾಮಸ್ಥರ ಸಹಕಾರದಿಂದ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶಿಲಾನ್ಯಾಸ ಮಾಡಿದ್ದು, ಶ್ರೀ ಕ್ಷೇತ್ರ ಗಣೇಶಪುರದ ವೇ.ಮೂ.ಸುನೀಲ್ ಭಟ್ ಅವರು ಪೂಜೆ ನೆರವೇರಿಸಿದರು. ಕಾಟಿಪಳ್ಳ ಜಾನಕಿ ಚಾರಿಟೇಬಲ್ ಸೇವಾ ಟ್ರಸ್ಟ್ ಅಧ್ಯಕ್ಷ ಧರ್ಮೇಂದ್ರ ಕಾಟಿಪಳ್ಳ ಧಾರ್ಮಿಕ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು. ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ಪಿಲಿಂಗಾಲು ಅಧ್ಯಕ್ಷತೆ ವಹಿಸಿದ್ದರು.
ಮಂಗಳೂರು ಎಸಿಪಿ ನಟರಾಜ್ ಎನ್, ಬಂಟ್ವಾಳ ತಾ.ಪಂ.ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಬಂಟ್ವಾಳ ಕ್ಷೇತ್ರ ಸಮನ್ವಯ ಅಧಿಕಾರಿ ರಾಘವೇಂದ್ರ ಬಳ್ಳಾಲ್, ಶಾಲೆಯ ಸಂಚಾಲಕ ಶ್ರೀಪತಿ ಭಟ್, ಗ್ರಾ.ಪಂ.ಉಪಾಧ್ಯಕ್ಷೆ ಜಯಶ್ರೀ, ಮಂಗಳೂರು ಎನ್ ಎಂಪಿಟಿಯ ಮಾಜಿ ಟ್ರಸ್ಟಿ ಸುಧಾಕರ ಕಾಮತ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ವೇದಾವತಿ, ಕೆನರಾ ಬ್ಯಾಂಕ್ ಜಿ.ಕೆ, ಗ್ರಾ.ಪಂ.ಸದಸ್ಯರಾದ ಹರೀಶ್ ಪೂಜಾರಿ, ಲಕ್ಷ್ಮೀನಾರಾಯಣ ಗೌಡ, ಗುತ್ತುಮನೆತನದ ಕೃಷ್ಣರಾಜ ಜೈನ್, ನಿವೃತ್ತ ಶಿಕ್ಷಕ ಸೋಮಪ್ಪ ಮಡಿವಾಳ, ಶಾಲೆಯ ಸಂಚಾಲಕ ಶ್ರೀಪತಿ ಭಟ್, ಪಂಜಿಕಲ್ಲು ಗರಡಿಯ ಕಾರ್ಯಾಧ್ಯಕ್ಷ ಪ್ರಕಾಶ್ ಕುಮಾರ್ ಜೈನ್ ಪೀರ್ದಬೆಟ್ಟುಗುತ್ತು, ಜಾನಕಿ ಚಾರಿಟೇಬಲ್ ಸೇವಾ ಟ್ರಸ್ಟಿನ ಲತಾ ಧರ್ಮೇಂದ್ರ, ಮುಖ್ಯಶಿಕ್ಷಕ ದೊಡ್ಡಪ್ಪ ಎಚ್, ಸದಾನಂದ ಶೆಟ್ಟಿ, ದಿನೇಶ್ ಶೆಟ್ಟಿ, ಗಂಗಾಧರ ವಿ.ಪೂಜಾರಿ, ಕೇಶವ ಪೂಜಾರಿ ಉಪಸ್ಥಿತರಿದ್ದರು.