ಕಾಸರಗೋಡು, ನ.22 (DaijiworldNews/HR): ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಾ ರೈಲು ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಕೆಎಸ್ಇಬಿ ನೌಕರರೋರ್ವ ರೈಲು ಬಡಿದು ಮೃತಪಟ್ಟ ದಾರುಣ ಘಟನೆ ಬೇಕಲ ಸಮೀಪದ ಚೇಟುಕುಂಡು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಮೃತಪಟ್ಟವರನ್ನು ಪೆರಿಯ ಕಾಯಕುಲದ ಶರಣ್ (26) ಎಂದು ಗುರುತಿಸಲಾಗಿದೆ.
ಚಿತ್ತಾರಿ ವಿದ್ಯುತ್ ಕಚೇರಿಯ ಮೀಟರ್ ರೀಡರ್ ನೌಕರ ರಾಗಿದ್ದರು. ಇಂದು ಮಧ್ಯಾಹ್ನ ಕರ್ತವ್ಯ ಕ್ಕೆ ತೆರಳುತ್ತಿದ್ದಾಗ ರೈಲು ಬಡಿದು ಈ ದುರ್ಘಟನೆ ನಡೆದಿದೆ.
ಇನ್ನು ಡಿಕ್ಕಿ ಹೊಡೆದ ರಭಸಕ್ಕೆ ಶರಣ್ ಸ್ಥಳ ದಲ್ಲೇ ಮೃತಪಟ್ಟಿದ್ದು, ಬೇಕಲ ಪೊಲೀಸರು ಮಹಜರು ನಡೆಸಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಾಗಿದೆ.