ಮಂಗಳೂರು, ನ.22 (DaijiworldNews/HR): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ದಾಸ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
-
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕುಮಾರ್ ಅವರು, ಕನಕ ದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ,ಮನುಷ್ಯನು ಜಾತಿ,ಕುಲವನ್ನು ಮೀರಿ ಬೆಳೆಯಬೇಕು ಎಂಬ ಸಂದೇಶ ನೀಡಿರುವ ಕನಕದಾಸರು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ ಎಂದರು.
ಅಪರ ಜಿಲ್ಲಾಧಿಕಾರಿ ಮಾಣಿಕ್ಯ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು, ಕರಾವಳಿ ಕುರುಬರ ಸಂಘ (ರಿ)ದ ಅಧ್ಯಕ್ಷ ಯಮನಪ್ಪ ನೋಟಗಾರ್, ಕರ್ನಾಟಕ ಕುರುಬರ ಸಂಘ (ರಿ)ದ ಸಹ ಕಾವ್ಯದರ್ಶಿ ಶಿವಾನಂದ ಯಲಜೇರಿ,ಮಂಗಳೂರು ಹಾಲುಮತದ ಅಧ್ಯಕ್ಷ ರಂಗಪ್ಪ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಅಧ್ಯಕ್ಷ ಧನು, ಕರ್ನಾಟಕ ಪ್ರದೇಶ ಕುರುಬರ ಪದವಿಧರ ಸಂಘ(ರಿ)ದ ಅಧ್ಯಕ್ಷ ತುಳಸಿರಾಜ್ ಹಾಗೂ ಇತರೆ ಗಣ್ಯರು ಕನಕದಾಸರ ಭಾವಚಿತ್ರಕ್ಕೆ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ ಸ್ವಾಗತಿಸಿ, ವಂದಿಸಿರು.