ಮಂಗಳೂರು, ನ 23 (DaijiworldNews/MS): ಖಾಸಗಿ ಚಾನಲ್ ವರದಿಗಾರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ನ. 22ರ ಮಂಗಳವಾರ ನಡೆದಿದೆ. ಹಲ್ಲೆಗೊಳಗಾಗಿರುವ ಪರ್ತಕರ್ತ ಸುಖ್ ಪಾಲ್ ಪೊಳಲಿ ತಲೆಗೆ ತೀವ್ರ ತರದ ಗಾಯವಾಗಿದ್ದು ಸದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಲ್ಲೆ ನಡೆಸಿದ ಆರೋಪಿಯನ್ನು ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ. ವೈಯಕ್ತಿಕ ವಿಚಾರದ ದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿ ನಿನ್ನೆ ಸಂಜೆ ರಾಡ್ ನಿಂದ ಸುಖ್ ಪಾಲ್ ಮೇಲೆ ಹಲ್ಲೆ ನಡೆಸಿದ್ದ ಎಂದು ತಿಳಿದುಬಂದಿದೆ.
ಆರೋಪಿಯನ್ನು ಭಾರತೀಯ ದಂಡ ಸಂಹಿತೆ 307 ಅಡಿಯಲ್ಲಿ ಉರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಪಟ್ಟಂತೆ 324 341 ಐಪಿಸಿ ಅಡಿಯಲ್ಲಿ ಪ್ರತಿ ದೂರು ಸಹ ದಾಖಲಿಸಲಾಗಿದೆ.