ಮಂಗಳೂರು, ನ. 23 (DaijiworldNews/SM): ನಗರ ಹೊರವಲಯದ ಪರಾರಿ ಸಮೀಪದಲ್ಲಿ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಖಂಡಿಸಿ ಸ್ಥಳೀಯ ನಾಗರಿಕರು ದೀಪ ಹಚ್ಚಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯುದ್ದಕ್ಕೂ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು. ಅಲ್ಲದೆ, ಮೃತ ಬಾಲಕಿಗೆ ದೀಪಗಳನ್ನು ಹಚ್ಚಿ ಶ್ರದ್ದಾಂಜಲಿ ಅರ್ಪಿಸಲಾಯಿತು. ಈ ವೇಳೆ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರನಂದ ಸ್ವಾಮೀಜಿ, ಈ ರೀತಿಯ ಘಟನೆ ಮಂಗಳೂರಿನಲ್ಲಿ ನಡೆಯಬಾರದಿತ್ತು. ಸಣ್ಣ ವಯಸ್ಸಿನ ಮಗುವನ್ನು ಆ ರೀತಿ ವ್ಯಘ್ರವಾಗಿ ನಡೆಸಿದ್ದಾರೆ ಎಂದಾದರೆ ನಮಗೆ ಇದನ್ನು ನಂಬಲು ಆಗುತ್ತಿಲ್ಲ. ಮಂಗಳೂರಿನಲ್ಲಿ ಇಂತಹದೊಂದು ಘಟನೆ ಇಲ್ಲಿಯತನಕ ಆಗಲಿಲ್ಲ ಎಂದರು.
ಇನ್ನು ಭಾಗವಹಿಸಿದ ಎಲ್ಲಾ ಸಾರ್ವಜನಿಕರು ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣಾತಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಆಗ್ರಹಿಸಿದರು.