ಮಂಗಳೂರು, ನ.24 (DaijiworldNews/PY): ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದ, ಪ್ರಸಕ್ತ ಮಂಗಳೂರು ಸ್ಮಾರ್ಟ್ ಸಿಟಿ ಅಧಿಕಾರಿಯಾಗಿರುವ ಕೆ ಎಸ್ ಲಿಂಗೇಗೌಡ ಅವರ ಮನೆ ಮೇಲೆ ಇಂದು ಎಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಮಂಗಳೂರಿನ ಉರ್ವದಲ್ಲಿರುವ ಲಿಂಗೇಗೌಡ ಅವರ ಮನೆಗೆ ಇಂದು ಏಳು ಮಂದಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎನ್ನಲಾಗಿದೆ.
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿಯಲ್ಲಿ ಲಿಂಗೇಗೌಡ ಅವರ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಈ ನಡುವೆ ಬೆಂಗಳೂರು, ಕಲಬುರಗಿ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಎಸಿಬಿ ದಾಳಿ ನಡೆದಿದೆ. ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಂಡ್ಯ ಹೆಚ್ಎಲ್ಬಿಸಿ ಇಇ ಕೆ.ಶ್ರೀನಿವಾಸ್, ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಗದಗದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ನಿವಾಸದ ಮೇಲೆ ಕೂಡಾ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.