ಉಡುಪಿ, ನ.25 (DaijiworldNews/PY): ಜ್ಯುವೆಲ್ಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವುಗೈದ ಘಟನೆ ನ.23ರಂದು ನಡೆದಿದೆ.
ಉಡುಪಿಯ ಶಿವಳ್ಳಿ ಗ್ರಾಮದ ವಿದ್ಯಾಸಮುದ್ರ ಮಾರ್ಗ ಬಳಿ ಇರುವ ಸುಲ್ತಾನ್ ಡೈಮಂಡ್ ಆಂಡ್ ಗೋಲ್ಡ್ ಜ್ಯುವೆಲ್ಲರಿ ಅಂಗಡಿಗೆ ಇಬ್ಬರು ಬುರ್ಖಾ ಧರಿಸಿ ಬಂದಿದ್ದು, ಸೇಲ್ಸ್ ಮೆನ್ ಮೊಹಮ್ಮದ್ ಮುಬಾರಕ್ ಬಳಿ ಚಿನ್ನದ ಬಳೆಗಳನ್ನು ತೋರಿಸುವಂತೆ ಹೇಳಿ, ಬೇರೆ ಬೇರೆ ಬಳೆಗಳನ್ನು ನೋಡುತ್ತಿದ್ದ ಮಹಿಳೆಯರು ಸೇಲ್ಸ್ಮೆನ್ ಗಮನವನ್ನು ಬೇರೆಡೆಗೆ ಸೆಳೆದು ಒಟ್ಟು 60 ಗ್ರಾಂ ತೂಕದ 4 ಚಿನ್ನದ ಬಳೆಗಳನ್ನು ಮೋಸದಿಂದ ಕಳವುಗೈದಿದ್ದಾರೆ.
ಚಿನ್ನದ ಬಳೆಗಳ ಒಟ್ಟು ಮೌಲ್ಯ 3,00,000 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.