ಮಂಗಳೂರು, ನ 26 (DaijiworldNews/MS): ಸರ್ಕಾರಿ ಕೆಲಸ ದೇವರ ಕೆಲಸ ಎನ್ನುತ್ತಾರೆ. ಆದರೆ ಇಲ್ಲೊಬ್ಬ ಅಧಿಕಾರಿ ತಾನು ಒಳ್ಳೆಯ ಹುದ್ದೆಯಲ್ಲಿದ್ದರೂ ಮಾಡಬಾರದ ಕೆಲಸವನ್ನೇ ಮಾಡಿ ಸರ್ಕಾರಿ ಹುದ್ದೆಯ ಘನತೆಗೆ ಧಕ್ಕೆ ತರುವಂತೆ ವರ್ತಿಸುತ್ತಿರುವ ಆರೋಪ ಕೇಳಿಬಂದಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯ ಅಧೀನದಲ್ಲಿ ಬರುವ ಜಿಲ್ಲಾ ಕಾರ್ಯಕ್ರಮಾಧಿಕಾರಿಯಾಗಿರುವ ಡಾ. ಡಾ.ರತ್ನಾಕರ್ , ಕಚೇರಿಯ ವೇಳೆಯಲ್ಲೇ ಕಚೇರಿಯ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದು, ತನ್ನ ಚೇಷ್ಟೆಗಳಿಗೆ ಸಹಕರಿಸಿದ ಸಿಬ್ಬಂದಿಗೆ ಮಾನಸಿಕ ಚಿತ್ರಹಿಂಸೆ ನೀಡುವ ಆರೋಪ ಕೇಳಿಬಂದಿದೆ. ಇದೀಗ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಆಸ್ಪತ್ರೆಯ ಕಚೇರಿಯಲ್ಲಿರುವ 9 ಮಹಿಳಾ ಸಿಬ್ಬಂದಿಗಳಿದ್ದು ಅವರೊಂದಿಗೆ ಪ್ರತಿನಿತ್ಯ ಸ್ವೀಕಾರಾರ್ಹವಲ್ಲದ ಅಸಭ್ಯ ವರ್ತನೆಯಲ್ಲಿ ತೊಡಗುವ ಡಾ.ರತ್ನಾಕರ್ ವೈದ್ಯಾಧಿಕಾರಿ ಮಾತ್ರವಲ್ಲದೆ ಆಯುಷ್ಮಾನ್ ನೋಡೆಲ್ ಆಫೀಸರ್ ಕೂಡ ಆಗಿದ್ದಾರೆ.
ಮಹಿಳಾ ಸಿಬ್ಬಂದಿಗಳನ್ನು ಕರೆದುಕೊಂಡು ಟ್ರಿಪ್ ಹೋಗುತ್ತಿದ್ದ ಡಾ.ರತ್ನಾಕರ್ ತನ್ನ ಚೆಲ್ಲಾಟಕ್ಕೆ ಸಹಕರಿಸದ ಸಿಬ್ಬಂದಿಗೆ ಟಾರ್ಚರ್ ನೀಡುತ್ತಿದ್ದರು ಎಂದು ತಿಳಿದುಬಂದಿದೆ. ಸಧ್ಯ ವೈದ್ಯನ ಕಾಮ ಕುಚೇಷ್ಟೆ ಹೊರಬರುತ್ತಿದ್ದಂತೆ ಹಿರಿಯ ಅಧಿಕಾರಿಗಳು ಸೇವೆಯಿಂದ ಅಮಾನತುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಾತ್ರವಲ್ಲದೆ ಆರೋಗ್ಯ ಇಲಾಖೆಯೂ ವೈದ್ಯನ ಮೇಲಿನ ಆರೋಪಗಳ ಕುರಿತು ತನಿಖೆಗೆ ಆದೇಶ ನೀಡಿದೆ.