ಬಂಟ್ವಾಳ, ನ.26 (DaijiworldNews/HR): ವಕೀಲರ ಕಚೇರಿಗೆ ನುಗ್ಗಿ ಕಳವು ಮಾಡಿದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಬಿಸಿರೋಡು ಸಿ.ಟಿ.ಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಎಂ ಸುದರ್ಶನ್ ಕುಮಾರ್ ಎಂಬವರ ಬಿಸಿರೋಡ್ ನ ಶ್ರೀನಿವಾಸ ಕಾಂಪ್ಲೆಕ್ಸ್ ನ 2ನೇ ಮಹಡಿಯಲ್ಲಿರುವ ಕಚೇರಿಗೆ ಗುರುವಾರ ತಡ ರಾತ್ರಿ ಕಳ್ಳರು ನುಗ್ಗಿ ನಗದು ಕಳವು ಮಾಡಿದ್ದಾರೆ ಎಂದು ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವಕೀಲರು 26 ರಂದು ಬೆಳಿಗ್ಗೆ 8.45 ಗಂಟೆಗೆ ಕಛೇರಿಗೆ ಬಂದಾಗ ಯಾರೋ ಕಳ್ಳರು ಕಛೇರಿಯ ಒಂದು ಭಾಗದ ಶಟರಿನ ಬೀಗವನ್ನು ತುಂಡರಿಸಿ ನಂತರ ಕಛೇರಿಯಲ್ಲಿ ಇರುವ ಪ್ಯಾಬ್ರಿಕೇಷನ್ ನನ್ನು ತುಂಡರಿಸಿ ಕಛೇರಿಯ ಒಳಗೆ ನುಗ್ಗಿ ಡ್ರವರ್ ನಲ್ಲಿ ಇದ್ದ ಅಂದಾಜು ರೂ.3000 ಹಣವನ್ನು ಕದ್ದುಕೊಂಡು ಹೋಗಿರುವುದು ಕಂಡು ಬಂದಿದೆ.
ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.