ಮಂಜೇಶ್ವರ, ನ.26 (DaijiworldNews/HR): ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ114 ಕಿಲೋ ಗಾಂಜಾ ಸಹಿತ ಓರ್ವನನ್ನುಅಬಕಾರಿ ದಳದ ಸಿಬಂದಿಗಳು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕಾಸರಗೋಡು ಚಟ್ಟಂಗುಯಿಯ ಮುಹಮ್ಮದ್ ಅಜ್ಮಲ್ (23) ಎಂದು ಗುರುತಿಸಲಾಗಿದೆ.
ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಸಿಬಂದಿಗಳು ತಲಪಾಡಿಯಲ್ಲಿ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ.
ಕಾರಿನ ಡಿಕ್ಕಿಯಲ್ಲಿ 54 ಪ್ಯಾಕೆಟ್ ಗಳಲ್ಲಿ ಗಾಂಜಾವನ್ನು ತುಂಬಿಸಿ ಕೇರಳಕ್ಕೆ ಸಾಗಾಟ ಮಾಡಲಾಗುತ್ತಿತ್ತು. ಆಂಧ್ರಪ್ರದೇಶದಿಂದ ಗಾಂಜಾವನ್ನು ಕಾಸರಗೋಡಿಗೆ ಸಾಗಾಟ ಮಾಡುತ್ತಿದ್ದುದಾಗಿ ಬಂಧಿತ ತಪ್ಪೊಪ್ಪಿಕೊಂಡಿದ್ದಾನೆ.