ಪುತ್ತೂರು, ನ.26 (DaijiworldNews/HR): ಕೃಷಿ ಭೂಮಿಯನ್ನು ನೋಡಲು ಬಂದಿದ್ದ ಮೈಸೂರಿನ ಫೋಟೊಗ್ರಾಫರ್ ಜಗದೀಶ್ (58) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ಆರೋಪಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಓರ್ವ ಮಹಿಳೆ ಸೇರಿ ನಾಲ್ವರನ್ನು ಬಂಧಿಸಲಾಗಿದ್ದು,ಇಂದು ಬಂಧಿತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಕೃತ್ಯಕ್ಕೆ ಒಳಸಂಚು ನಡೆಸಿದ್ದ ಆರೋಪದಲ್ಲಿ ಪುತ್ತೂರು ಬಡಗನ್ನೂರು ಗ್ರಾಮದ ಅಣಿಲೆ ಜಯರಾಜ್ ಶೆಟ್ಟಿ (48) ಎಂಬಾತನನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳ ವಿಚಾರಣೆ ವೇಳೆ ಕೃತ್ಯಕ್ಕೆ ಒಳಸಂಚು ರೂಪಿಸಿರುವುದು ಜಯರಾಜ್ ಶೆಟ್ಟಿ ಎಂಬ ಮಾಹಿತಿಯನ್ನು ಪಡೆದುಕೊಂಡಿರುವ ಪೊಲೀಸರು ಈತನನ್ನು ಬಂಧಿಸಿದ್ದು, ಈತ ಕೆಲ ವರ್ಷಗಳ ಹಿಂದೆ ನಡೆದ ತಿಂಗಳಾಡಿ ಉಮೇಶ್ ರೈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿದ್ದ.